Home / ಕವನ / ಕವಿತೆ / ಅಮರಾವತಿ

ಅಮರಾವತಿ

ಕುತೂಹಲದ ಹೃದಯ ಕಣ್ಣು ಮನಸು
ಒಮ್ಮಿಂದೊಮ್ಮೆಲೆ ಕಕ್ಕಾಬಿಕ್ಕಿ
ಲಂಡನ್ ಸಡಗರದ ಕನಸು ನನಸಾಗುವ
ಹತ್ತಿರ ಹತ್ತಿರದ ಸಮಯ
ಸಂಭ್ರಮದ ವಿದ್ಯುತ್ ಸಂಚಾರ ಒಳಗೊಳಗೇ….

ಸಖಿಯ ಉಲಿತ ಕೆಲವೇನಿಮಿಷ
ನಗರದಮೇಲೆ ಹಿಮಾಚ್ಫಾದನೆ
ಮೈನಸ್ ಸೆಲ್ಸಿಯಸ್ ಹಿತ್ರೋಗೆ ಹೆಜ್ಜೆ ಇಡಲು
ಒಂದು ಎರಡು ಮೂರು ನಾಲ್ಕು ಸುತ್ತು
ತಿರುಗುಚಕ್ರದನುಭವ
ಏರಿಳಿತ ಹೃದಯ ಬಡಿತ ಒಳಗೆಲ್ಲ ನಿಶ್ಶಬ್ಧ

ಹುಡುಕಾಟ ಹುಡುಕಾಟ ಎಲ್ಲಿದೆ ರಾಣಿಮಹಲು
ಮೋಡ ಮಿಣುಕು ತುಣುಕು ಮಿಣುಕು
ಕಣ್ಣು ಮುಚ್ಚಾಲೆಯಾಟ ಐದನೆಯ ಸುತ್ತು
ಆಕಾಶಪ್ರದಕ್ಷಣೆ ವೀಕ್ಷಣೆ
ಪೆಗ್ಗೇರಿಸಿ ಬೆಚ್ಚಗಾಗಿರುವವರ ಇನ್ನೂ ಸುಖನಿದ್ರೆ
ಕಾಫಿಹೀರಿ ಕಿಟಕಿಯಾಚೆ ನೆಟ್ಟ ದೃಷ್ಟಿ
ನಡುವೆ ಮಂಜು ಕೊರೆತ

ಮೋಡ ಭೇದಿಸಿ ಇಳಿಮುಖದ ವಿಮಾನ
ತುಂಡುತುಂಡಾಗಿ ಕೊನೆಗೊಮ್ಮೆ ಇಡಿಯಾಗಿ
ಗಕ್ಕನೆ ಕಾಣಿಸಿತೊಂದು ಅವರಾವತಿ
ಮುಸ್ಸಂಜೆ ಹೊತ್ತು ಮಿಣಿಮಿಣಿ,
ಝಗಝಗ ದೀಪ ಹರಿದಾಡುವ ಬಣ್ಣ

ರಸ್ತೆಗಳ ಉದ್ದಗಲ ಯಕ್ಷಯಕ್ಷಿಣಿಯರು
ಇನ್ನೂ ಹುಡುಕಾಟ ರಾಣಿಯ ಮಹಲು
ಮಹಲಿನೊಳಿಲ್ಲ ರಾಜನ ಸಂಗಡ ರಾಣಿ
ಇವನಬಿಟ್ಟು ಅವನಾರೋ
ಅವನಬಿಟ್ಟು ಇನ್ಯಾರೋ, ಹಾದಿಹೆಣವಾಗಿ
ಬಿದ್ದ ರಾಜಕುಮಾರಿ
ಸೂರ್ಯಮುಳುಗಿ ಕಗ್ಗತ್ತಲು
ಅರಮನೆಗೆ ಗ್ರಹಣ
ನೂರೊಂದು ಕಥೆಗಳ ನಗರ
ಗಹಗಹಿಸಿ ನಗುವ ದೀಪಗಳು
ನನ್ನೆದೆಯೊಳಕ್ಕೆ ಆಲಂಗಿಸುವ ಕುತೂಹಲ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...