Home / ಕವನ / ಕವಿತೆ / ಅಮರಾವತಿ

ಅಮರಾವತಿ

ಕುತೂಹಲದ ಹೃದಯ ಕಣ್ಣು ಮನಸು
ಒಮ್ಮಿಂದೊಮ್ಮೆಲೆ ಕಕ್ಕಾಬಿಕ್ಕಿ
ಲಂಡನ್ ಸಡಗರದ ಕನಸು ನನಸಾಗುವ
ಹತ್ತಿರ ಹತ್ತಿರದ ಸಮಯ
ಸಂಭ್ರಮದ ವಿದ್ಯುತ್ ಸಂಚಾರ ಒಳಗೊಳಗೇ….

ಸಖಿಯ ಉಲಿತ ಕೆಲವೇನಿಮಿಷ
ನಗರದಮೇಲೆ ಹಿಮಾಚ್ಫಾದನೆ
ಮೈನಸ್ ಸೆಲ್ಸಿಯಸ್ ಹಿತ್ರೋಗೆ ಹೆಜ್ಜೆ ಇಡಲು
ಒಂದು ಎರಡು ಮೂರು ನಾಲ್ಕು ಸುತ್ತು
ತಿರುಗುಚಕ್ರದನುಭವ
ಏರಿಳಿತ ಹೃದಯ ಬಡಿತ ಒಳಗೆಲ್ಲ ನಿಶ್ಶಬ್ಧ

ಹುಡುಕಾಟ ಹುಡುಕಾಟ ಎಲ್ಲಿದೆ ರಾಣಿಮಹಲು
ಮೋಡ ಮಿಣುಕು ತುಣುಕು ಮಿಣುಕು
ಕಣ್ಣು ಮುಚ್ಚಾಲೆಯಾಟ ಐದನೆಯ ಸುತ್ತು
ಆಕಾಶಪ್ರದಕ್ಷಣೆ ವೀಕ್ಷಣೆ
ಪೆಗ್ಗೇರಿಸಿ ಬೆಚ್ಚಗಾಗಿರುವವರ ಇನ್ನೂ ಸುಖನಿದ್ರೆ
ಕಾಫಿಹೀರಿ ಕಿಟಕಿಯಾಚೆ ನೆಟ್ಟ ದೃಷ್ಟಿ
ನಡುವೆ ಮಂಜು ಕೊರೆತ

ಮೋಡ ಭೇದಿಸಿ ಇಳಿಮುಖದ ವಿಮಾನ
ತುಂಡುತುಂಡಾಗಿ ಕೊನೆಗೊಮ್ಮೆ ಇಡಿಯಾಗಿ
ಗಕ್ಕನೆ ಕಾಣಿಸಿತೊಂದು ಅವರಾವತಿ
ಮುಸ್ಸಂಜೆ ಹೊತ್ತು ಮಿಣಿಮಿಣಿ,
ಝಗಝಗ ದೀಪ ಹರಿದಾಡುವ ಬಣ್ಣ

ರಸ್ತೆಗಳ ಉದ್ದಗಲ ಯಕ್ಷಯಕ್ಷಿಣಿಯರು
ಇನ್ನೂ ಹುಡುಕಾಟ ರಾಣಿಯ ಮಹಲು
ಮಹಲಿನೊಳಿಲ್ಲ ರಾಜನ ಸಂಗಡ ರಾಣಿ
ಇವನಬಿಟ್ಟು ಅವನಾರೋ
ಅವನಬಿಟ್ಟು ಇನ್ಯಾರೋ, ಹಾದಿಹೆಣವಾಗಿ
ಬಿದ್ದ ರಾಜಕುಮಾರಿ
ಸೂರ್ಯಮುಳುಗಿ ಕಗ್ಗತ್ತಲು
ಅರಮನೆಗೆ ಗ್ರಹಣ
ನೂರೊಂದು ಕಥೆಗಳ ನಗರ
ಗಹಗಹಿಸಿ ನಗುವ ದೀಪಗಳು
ನನ್ನೆದೆಯೊಳಕ್ಕೆ ಆಲಂಗಿಸುವ ಕುತೂಹಲ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...