Home / ಕವನ / ಕವಿತೆ / ಕ್ಷಮಿಸು ತಂದೆ

ಕ್ಷಮಿಸು ತಂದೆ

ಎಲ್ಲರೆದೆಯೊಳಗೂ ಬಿರುಕಿನ ಗೋಡೆಗಳು
ಅದೇಕೆ ಅಷ್ಟಷ್ಟು ಎತ್ತರ ಇಷ್ಟಿಷ್ಟು ಅಗಲ
ಅಷ್ಟೊಂದು ಆಳ ಕೊಳ್ಳ ಕಣಿವೆಗಳು
ಭಾವನೆಗಳ ತಳಪಾಯ ಅಭದ್ರ ಕೃತಕ- ದೇವರೆ!

ಯುಗಯುಗಾಂತರದ ತಿರುವು ಹೊರಳು
ಗಳೊಳಗೂ ಇತ್ತು ಬಿತ್ತಿ ಬೆಳೆವ
ಪ್ರೀತಿ ಪ್ರೇಮ ವಿಶ್ವಾಸಗಳ ಬೀಜ
ಅದಕೇಕಿಂದು ರಾಹು ಬಡಿದು ಮೊಳಕೆ
ಒಡೆಯದೇ ಮನಮನ ಕಾಡಿಸುತಿವೆ- ದೇವರೆ!

ದಿಕ್ಕುದಿಕ್ಕುಗಳು ಸೀಳಿ ಚಡಪಡಿಸಿ
ಸಮುದ್ರಗಳು ಭೂಕಂಪನಕೆ ಕೋಲಾಹಲಿಸಿ
ಕಾಡು ಮೇಡು ಬೆಟ್ಟಸಾಲಿನ ಮೂಕ ಜೀವಗಳ
ಮೈಸುಟ್ಟ ನೆತ್ತರವಾಸನೆ ಹರಡಿ
ಮನಸಿಗೇಕೋ ತಳಮಳ ದೇವದೇವಾ!

ರಾತ್ರಿಯ ನಿರಮ್ಮಳ ಮೌನ ಸರಿದು
ಹಗಲಾಗುವ ಹಪಹಪಿಕೆಯೊಳಗೆ ಸಂಕಟಗಳ ಸುಳಿ
ಎಲ್ಲೆಲ್ಲೂ ಹಾವು ಏಣಿಯ ಆಟ
ದಾಳಗಳು, ದಾಳಗಳು, ಪ್ರಶ್ನಾರ್ಥಕ ವಿಷವರ್ತುಲ
ಅರ್ಥಸಿಗದ ದಾರಿಯ ತುಂಬಾ ವೇದನೆ ಚಡಪಡಿಕೆ- ದೇವರೆ!

ಕಳಿಸಿರುವೆ ಈ ಜಾತ್ರೆಗೆ ಮತಿತುಂಬಿ
ಕರೆಸಿಕೊಳ್ಳುವವನೂ ನೀನೆ
ಭಕ್ತರೊಳಗೆ ನೀನು, ನಿನ್ನೊಳಗೆ ಭಕ್ತರು
ಕರುಣಿಸು ಕರುಣಾಮಯನೆ ಮತಿಗೆಟ್ಟವರ.

ಸುರಿಸು ಎಲ್ಲರೆದೆಯಂಗಳಕೆ
ಪ್ರೀತಿ ಪ್ರೇಮ ವಿಶ್ವಾಸಗಳ ಧಾರಾಕಾರ ಮಳೆ-
ನಿನ್ನದೇ ಮಕ್ಕಳು, ನಿನ್ನದೇ ಉಸಿರು, ನಿನ್ನದೇ ಹಸಿರು
ತೇಲಿಸಿಬಿಡು ಅವರವರ ಕರ್ಮಕಾಂಡ
ಬಂಜರಿಸದಿರು ಭಾವನೆಗಳ ಭೂಮಿ
ಕ್ಷಮಿಸು, ತಂದೆ, ಶರಣು ಶರಣು ನಿನ್ನ ಪಾದಕೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...