Home / ಕವನ / ಕವಿತೆ / ಕ್ಷಮಿಸು ತಂದೆ

ಕ್ಷಮಿಸು ತಂದೆ

ಎಲ್ಲರೆದೆಯೊಳಗೂ ಬಿರುಕಿನ ಗೋಡೆಗಳು
ಅದೇಕೆ ಅಷ್ಟಷ್ಟು ಎತ್ತರ ಇಷ್ಟಿಷ್ಟು ಅಗಲ
ಅಷ್ಟೊಂದು ಆಳ ಕೊಳ್ಳ ಕಣಿವೆಗಳು
ಭಾವನೆಗಳ ತಳಪಾಯ ಅಭದ್ರ ಕೃತಕ- ದೇವರೆ!

ಯುಗಯುಗಾಂತರದ ತಿರುವು ಹೊರಳು
ಗಳೊಳಗೂ ಇತ್ತು ಬಿತ್ತಿ ಬೆಳೆವ
ಪ್ರೀತಿ ಪ್ರೇಮ ವಿಶ್ವಾಸಗಳ ಬೀಜ
ಅದಕೇಕಿಂದು ರಾಹು ಬಡಿದು ಮೊಳಕೆ
ಒಡೆಯದೇ ಮನಮನ ಕಾಡಿಸುತಿವೆ- ದೇವರೆ!

ದಿಕ್ಕುದಿಕ್ಕುಗಳು ಸೀಳಿ ಚಡಪಡಿಸಿ
ಸಮುದ್ರಗಳು ಭೂಕಂಪನಕೆ ಕೋಲಾಹಲಿಸಿ
ಕಾಡು ಮೇಡು ಬೆಟ್ಟಸಾಲಿನ ಮೂಕ ಜೀವಗಳ
ಮೈಸುಟ್ಟ ನೆತ್ತರವಾಸನೆ ಹರಡಿ
ಮನಸಿಗೇಕೋ ತಳಮಳ ದೇವದೇವಾ!

ರಾತ್ರಿಯ ನಿರಮ್ಮಳ ಮೌನ ಸರಿದು
ಹಗಲಾಗುವ ಹಪಹಪಿಕೆಯೊಳಗೆ ಸಂಕಟಗಳ ಸುಳಿ
ಎಲ್ಲೆಲ್ಲೂ ಹಾವು ಏಣಿಯ ಆಟ
ದಾಳಗಳು, ದಾಳಗಳು, ಪ್ರಶ್ನಾರ್ಥಕ ವಿಷವರ್ತುಲ
ಅರ್ಥಸಿಗದ ದಾರಿಯ ತುಂಬಾ ವೇದನೆ ಚಡಪಡಿಕೆ- ದೇವರೆ!

ಕಳಿಸಿರುವೆ ಈ ಜಾತ್ರೆಗೆ ಮತಿತುಂಬಿ
ಕರೆಸಿಕೊಳ್ಳುವವನೂ ನೀನೆ
ಭಕ್ತರೊಳಗೆ ನೀನು, ನಿನ್ನೊಳಗೆ ಭಕ್ತರು
ಕರುಣಿಸು ಕರುಣಾಮಯನೆ ಮತಿಗೆಟ್ಟವರ.

ಸುರಿಸು ಎಲ್ಲರೆದೆಯಂಗಳಕೆ
ಪ್ರೀತಿ ಪ್ರೇಮ ವಿಶ್ವಾಸಗಳ ಧಾರಾಕಾರ ಮಳೆ-
ನಿನ್ನದೇ ಮಕ್ಕಳು, ನಿನ್ನದೇ ಉಸಿರು, ನಿನ್ನದೇ ಹಸಿರು
ತೇಲಿಸಿಬಿಡು ಅವರವರ ಕರ್ಮಕಾಂಡ
ಬಂಜರಿಸದಿರು ಭಾವನೆಗಳ ಭೂಮಿ
ಕ್ಷಮಿಸು, ತಂದೆ, ಶರಣು ಶರಣು ನಿನ್ನ ಪಾದಕೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...