Home / ಕವನ / ಕವಿತೆ / ಪೆರ್ರೂಗೀ ಮತ್ತು ಮೋನಲಿಸಾ

ಪೆರ್ರೂಗೀ ಮತ್ತು ಮೋನಲಿಸಾ

ನನ್ನ ನಂಬು ಮೋನಾಲಿಸಾ
ನಾನು ಹಗಲು ಗಳ್ಳನೂ ಆಲ್ಲ ತಲೆಹಿಡುಕನೂ ಅಲ್ಲ
ಪೊಳ್ಳು ಭ್ರಮೆ ಎಂದರೂ ಅನ್ನಲಿ
ಈ ಜನ ಈ ನ್ಯಾಯಾಲಯ
ನೀನು ನನ್ನವಳೇ.
ಮರೆಯಲಾದೀತೆ ನಾನೂರು ವರ್ಷಗಳ
ಹಿಂದಿನ ನಮ್ಮ ಸಂಸಾರ?
ಹೇಗೆ ಹೇಳಲಿ ಇವರಿಗೆ
ಸಧೃಢ ದೇಹ ಮುಗುಳ್ನಗೆ
ಹೊಳಪು ಕಣ್ಣುಗಳ ನೀನು
ಹೊರಬಿದ್ದಾಗೆಲ್ಲ ನಾನದೆಷ್ಟು ಅಸೂಯೆ ಪಡುತ್ತಿದ್ದೆ ಗೊತ್ತೇ
ಲಿರ್ಯೊನಾರ್ಡ್ ಡಾ ವಿಂಚಿ ಕುಂಚಕ್ಕೆ
ನೀ ರೂಪದರ್ಶಿ ಯಾದಾಗ ನಾನು
ಚಡಪಡಿಸಿದ್ದೇನು ನಿನ್ನ ಕೆನ್ನಗೆ ಬಾರಿಸಿದ್ದೇನು
ಪೂನರ್ಜನ್ಮ ಇಲ್ಲದಿದ್ದರೆ
ಮತ್ತೆ ಹುಟ್ಟಿ ನಿನ್ನನ್ನು ನೆನಪಿಸಿಕೊಳ್ಳುವ
ಪ್ರಮೇಯವೇ ಇರುತ್ತಿರಲಿಲ್ಲವೇನೋ
ನಾನು ಮತ್ತೆ ಹುಟ್ಟಿದ್ದೇನೆ
ತೈಲ ಚಿತ್ರದ ನೀನು
ಮತ್ತೆ ಮತ್ತೆ ನನ್ನನ್ನು ಕಾಡುತ್ತಿರುವಿ
ಪ್ಯಾರಿಸ್ಸಿನ ಸುತ್ತಲ್ಲ ಹರಿದಾಡಿದ
ಸೈನ್ ನದಿಯಂತೆ ಕೆಂಪು ಹಸಿರು
ಮಿಶ್ರಿತ ಪ್ಲುಟೋಯ್ ಗಿಡಗಳಂತೆ.
ಲೂವೃ ಮ್ಯೂಸಿಯಂ
ಬಂಧಿಖಾನೆಯಲ್ಲೇಕಿರಬೇಕು ನೀನು
ಎಂದೇ ಭದ್ರತಾ ಪಡೆಯನ್ನೇ ಭೇದಿಸಿ
ನಿನ್ನ ಹೊರಕರೆದುಕೊಂಡು ಬಂದೆ
ಊರೂರು ಸುತ್ತಿದೆ.

“ನಿನ್ನ ಮುಗಳ್ನಗೆಯಿಂದ
ಪ್ಯಾರಿಸ್ಸಿನ ಮುಸ್ಸಂಜೆಗಳಿಗೆ ರಂಗೇರುತ್ತಿತ್ತು
‘ಶಾಂಪೇನ್’ ಬಾಟಲ್‌ಗಳು ಖಾಲಿಯಾಗುತ್ತಿದ್ದವು’
ಮೋನಾಲಿಸಾ ನೀನೂ ಲೂವೃದ ಮಹಾರಾಣಿ
ಜಗತ್ತಿನ ರಾಜಕುಮಾರಿ
ನನ್ನ ಗುಡಿಸಲಲ್ಲೇನು
ನಿನ್ನ ನಗು ಹೊಳಪು ಕಣ್ಣು ಕಂದಿಡುತ್ತಿದೆಯಲ್ಲ
ರೂಪರಾಶಿ ರೂಪಸಿ
ಇದೆಂತಹ ವಿರಹವೇದನೆ ನನಗೆ
ಚಿತ್ರ ಹರಿದು ಸುಡಲೂ ಮನಸ್ಸು ಬರುತ್ತಿಲ್ಲ
ನೀನು ನನ್ನವಳು.
ಪೋಲೀಸ ವಶಕ್ಕೆ ನಾನು ಸೇರಿದ್ದೇನು ಮಹಾ ಬಿಡು
ನನ್ನಿಂದ ಅವರು ಕಿತ್ತುಕೊಂಡರಲ್ಲ ನಿನ್ನ
ನ್ಯಾಯಾಲಯ ಹುಚ್ಚ ಮನೋರೋಗಿ ಎಂದಿತೇನೋ
ನಿಜವಾಗಿಯೂ ನಾನೇನೂ ಅಲ್ಲ
ಪುನರ್ಜನ್ಮದಲ್ಲಿ ನಂಬಿಕೆ ಇರುವವನು ಮಾತ್ರ.
ಜೈಲಿನಿಂದ ಹೊರಬಿದ್ದು ಎಷ್ಟೋ ವರ್ಷಗಳಾದವು
ಈಗ ನೂರರ ಮುದುಕ
ಲುವೃದ ಎದುರಿನ ಸೈನ್ ನದಿಯ
ದಡದಲ್ಲೇ ಕುಳಿತು
ಹದಿಹರೆಯರ ಮುಗುಳ್ನಗೆಯಲಿ
ನಿನ್ನ ಕಾಣುತ್ತ ಬೆಚ್ಚಗಾಗುತ್ತಿದ್ದೇನೆ ಲೀಸಾ
ಮತ್ತೆ ಮತ್ತೆ ಅವರಲ್ಲಿ
ನೀ ಹುಟ್ಟಿ ಬರುತ್ತಲೇ ಇರುವಿಯೆಂದು.

(ಪ್ಯಾರಿಸ್ಸಿನ ಲೂವೃ ಮ್ಯೂಸಿಯಂದಲ್ಲಿ ಮೋನಾಲಿಸಾ ಚಿತ್ರ ನೋಡಿದಾಗ – ೧೫೦೬ರಲ್ಲಿ ಲಿರ್ಯೊನಾರ್ಡ್‌ ಡಾ ವಿಂಚಿ ಮೋನಾಲಿಸಾ ತೈಲ ಚಿತ್ರ ತೆಗೆದ. ಅದು ಜಗತ್ತ್ರಸಿದ್ದವಾಯಿತು. ೧೯೧೧ ರಲ್ಲಿ ಪುನರ್ಜನ್ಮದಲ್ಲಿ ನಂಬಕೆ ಇರುವ ಪೆರೂಗೀ ಎನ್ನುವ ವ್ಯಕ್ತಿ ಈ ಚಿತ್ರ ಕಳವು ಮಾಡಿವ. ಕೊನೆಗೆ ಇವನು ಸಿಕ್ಕಿಬಿದ್ದು ವಿಚಾರಣೆ ನ್ಯಾಯಾಲಯದಲ್ಲಿ ನಡೆದಾಗ ಇವನೊಬ್ಬ ಮನೋರೋಗಿ ಎಂದು ಜೈಲಿನಿಂದ ಬಿಡುಗಡೆ ಮಾಡಿದರು. ಕಳುವಿನ ಉದ್ದೇಶ ಏನಿರಬಹುದು? ದೇಶ ವಿದೇಶದಲ್ಲಿ ಸುದ್ದಿ ಹಬ್ಬಿತ್ತು.)
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...