Home / ಕವನ / ಕವಿತೆ / ಹುಟ್ಟು

ಹುಟ್ಟು

ಎಲ್ಲೋ ಬೆಳೆದ ಗಿಡಮರಗಳ
ಒಣ ತರಗಲೆಗಳ ಸವರಿ ಗಾಳಿ,
ತೇಲಿ ಬಿಟ್ಟ ಕಣಜ ಬದುವಿನ ಕಾಳು,
ಹೋಗಿದ್ದಾರೆ ಮೋಡಗಳ ಕರೆತರಲು
ಕೈಯೊಂದು ಬೇಕಿದೆ ಹನಿಗಳ ಸಿಂಪಡಿಸಲು
ಎಟುಕು ಮೊಳಕೆಗೆ ಕಾದು ಕುಳಿತ ಮರ್ಮರ.

ಯಾರಿಗೆ ಗೊತ್ತು ಕಾವು ಕೊಡುವ ಖಾತ್ರಿ
ಬಹಳ ದೂರದಲ್ಲಿನ ನಕ್ಷತ್ರಗಳು ಮಿಣುಕಿ
ಕಣ್ಣ ಎವೆ ತೆರೆಯುವುದರೊಳಗೆ ಬೇರಿಗಿಳಿದ
ಜೀವ ಫಸಲು ಆಗಲು ಹಾತೊರೆದ ಕ್ಷಣ
ಕತ್ತಲ ಸಾಗರದಲಿ ತೇಲಿಸಿದ ಭರವಸೆಗಳು.
ಹನಿ ಇಬ್ಬನಿ ಹರಿದ ಸಾಲು ಉಸಿರು ಬಸಿರು.

ಎಲ್ಲೋ ಬೆಸೆದ ಮೋಡಗಳ ನಡುವೆ
ರಾತ್ರಿಗಳ ಚಿಕ್ಕಿಗಳು ಬೆರೆತು ತೂಕಡಿಸಿ,
ಹಕ್ಕಿ ಪಕ್ಷಿಗಳು ಎದೆಗೆ ಅಮರಿಕೊಂಡ ಪ್ರೀತಿ,
ಸಾಲು ಸಾಲು ಕಿರಣಗಳ ಸ್ಪರ್ಶಕೆ ಮೈ ದಡವಿ
ಅರಳೀ ಘಮ್ಮೆಂದು ಹೂವಗಂಧ
ಗಾಳಿ ಕಾಳು ನಕ್ಷತ್ರ ಇಬ್ಬನಿ ಮಿನುಗಿದ ಧರೆ.

ಮಳೆ ಗಾಳಿ ಮೋಡ ಉಡಿ ತುಂಬಿದ ಮಾಯೆ
ಜಗಕೆ ಅರಳಲು ಹೇಳಿ ಸ್ಪರ್ಶಕೆ ಮರುಳಾದಳು
ರೂಪ ರಸಗಂಧ ಆನಂದ ಲೋಕ ಕಣ್ಣುಗಳ,
ಹಿಗ್ಗಿದ ಸುಗ್ಗೀ ಕುಣಿತದಲಿ ಬೆಳಕಾಡಿಸಿ,
ಒಡಲ ಹರಿದು ಹರಿಸಿ ಚೆಂದ,
ಆಟವಾಡಿದಳು ಸಿರಿಗಂಧಿ ಎಂದಿಗೂ ಅಮರ.
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...