Home / ಕವನ / ಹಾಯ್ಕು / ಹಾಯ್ಕಗಳು

ಹಾಯ್ಕಗಳು

ಬೇಸಿಗೆಯ ಸಂಜೆ
ತಂಗಾಳಿ ಬೀಸಿತು
ತಂಪಿನಲಿ ಅವನ ಉಸಿರಿತ್ತು.

ರಾತ್ರಿಯಲಿ ಆಕಾಶದ
ತುಂಬ ಬೆಳದಿಂಗಳು ಹರಡಿದೆ
ಅಂಗಳದಲಿ ಮಕ್ಕಳು ತುಂಬಿಕೊಂಡಿವೆ.

ಮುಂಜಾವಿನಲಿ
ಹನಿಹನಿ ಇಬ್ಬನಿ ಹಾಸಿವೆ
ನನ್ನಲ್ಲಿ ಕವಿತೆಯ ಜೀವ ಒಸರುತಿದೆ.

ಮಧ್ಯಾಹ್ನದಲಿ
ಒಂದು ಚಮಚ ನೀರು
ಭಾವಗಳನ್ನು ನಿಶ್ಶಬ್ದವಾಗಿಸುತ್ತಿದೆ.

ಓಣಿಯಲಿ ನಡುರಾತ್ರಿ
ಹೆಜ್ಜೆ ಸಪ್ಪಳಗಳು
ನಾಯಿಗಳು ತುಂಬ ಊಳಿಡುತ್ತವೆ.

ಮಗು ಗಲಗಲ ತೊದಲಿತು
ಎದೆಯಲಿ
ದೇವಸ್ಥಾನದ ಗಂಟೆಗಳು ಮೊಳಗಿದವು.

ಅಮವಾಸ್ಯೆಯ ನಂತರ
ಚಂದ್ರ ಹುಟ್ಟುತ್ತಾನೆ
ಕಲ್ಲು ಸಂದಿಯಿಂದ ಕಪ್ಪೆಗಳು ವಟಗುಟ್ಟುತ್ತವೆ.

ಚಿಟ್ಟೆ ಕೆಂಪು ದಾಸವಾಳದ
ಮೇಲೆ ಹಾರಾಡುತ್ತವೆ
ಸೂರ್ಯ ಕೆಂಪಾಗಿ ಉದಯಿಸುತ್ತಾನೆ.

ಮಾಗಿಯ ಚಳಿಯಲಿ
ಹೊದ್ದ ಕಂಬಳಿಯಿಂದ
ನೆನಪಿನ ಕಂಬಳಿ ಹುಳಗಳಿದ್ದವು.

ಚಳಿಗಾಲದ ಸಂಜೆ
ಗಾಳಿ ಸವರುತ್ತವೆ ಜೀವವ
ದೂರದಿಂದ ಉದುರುತ್ತದೆ ನೆರಳು

ಬೇಸಿಗೆಯಲಿ ಅಕಾಲಿಕ ಮಳೆ
ಮಣ್ಣವಾಸನೆಗೆ
ಎದೆಯ ಕನಸುಗಳು ಬಿರಿದವು.

ಸಮುದ್ರದ ದಂಡೆಯಲಿ
ಅಲೆಗಳು ಅಪ್ಪಳಿಸಿವೆ
ನಾನಿನ್ನು ಜೀವಂತವಾಗಿರುವೆ.

ಸಂಜೆ ಹೂವು ಗಿಡ
ಮುಲುಕಾಡಿ ಕಂಪಿಸಿವೆ
ಚಿಟ್ಟೆಭಾರ ಹೆಗಲಿಗೇರಿಸಿಕೊಂಡಿವೆ.

ಅವಳು ಬದುಕು ಬೇಡ ಅಂದಳು.
ಸಾಯಂಕಾಲ ದೇವರ ಮನೆ ನೀಲಾಂಜನದಲಿ
ಮಕ್ಕಳ ಕಣ್ಣುಗಳು ಮಿನುಗಿದವು.

ಈದ್ ಚಾಂದ ಹರಡಿವೆ ತಿಳಿ ಬೆಳದಿಂಗಳು
ಓಣಿಯಲಿ ಹಲಗೆಗಳು ಭಾರಿಸುತ್ತಲಿದೆ
ಬಣ್ಣದ ಹೋಳಿ ಮೃದುವಾಗಿ ಸಿಂಗರಿಸಿದೆ ಊರನು.

ಸಾವಿನ ಕರಿನೆರಳು ತಬ್ಬಿ
ತಲೆಯ ಕೂದಲೆಲ್ಲಾ ಬೋಳು
ವಸಂತನ ಆಗಮವಾಗಿದೆ ಹಸಿರು ಚಿಗುರುತ್ತದೆ.

ಬದುಕಿನ ಕೊನೆಯ ಕ್ಷಣಗಳು
ಸಾವು ತಬ್ಬಿದೆ ಎಷ್ಟೊಂದು
ಶಾಂತಿ ಹಿತಗಳು ಅರಳಿವೆ ಎದೆಯೊಳಗೆ.

ಆ ಪಕ್ಷಿಯ ಏಕಾಂತರ ಹಾಡು
ನೇವರಿಸುತ್ತದೆ ಅವಳ ಕೂದಲು
ಎಲ್ಲಾ ಕಣಿವೆಗಳು ಬೆಳಕು ಹರಡುತ್ತಿದೆ.

ವಸಂತ ಮತ್ತೆ ಬಂದಿದ್ದಾನೆ.
ಪುಟ್ಟ ಹುಲ್ಲುಗರಿಯ ಬೆನ್ನ ಮೇಲೆ
ಹನಿ ಇಬ್ಬನಿ ಕುಳಿತಿದೆ ಒಂದೇ.

ಮಳೆ ಬಿದ್ದು ಒದ್ದೆಯಾದ ಮಣ್ಣು
ಅರಳಿದವು ಕವಿತೆಯ ಕಣ್ಣು
ನಿಶ್ಶಬ್ದದಲಿ ಕವಿ ಕುಳಿತಿದ್ದಾನೆ ಒಬ್ಬನೇ.

ಈ ಮಧ್ಯಾಹ್ನದ ಬಿಸಿಲಿಗೆ
ಬೋಧಿ ಮರದ
ನೆರಳಿನ ಕನವರಿಕೆ.

ಉದಯಿಸುತ್ತಿರುವ ಮಂಕಾದ
ಸೂರ್ಯ ಕಂಬದ ಮೇಲೆ
ಒಂಟಿ ಹಕ್ಕಿ ನೆನಪು.

ಅಂಗಳದ ಸರಿಗೆ ತುಂಬ
ಬಟ್ಟೆಗಳು
ಹಾರಾಡಿವೆ ಬಣ್ಣದ ಚಿಟ್ಟೆಗಳು.

ನೀಲಿ ಬಾನ ತುಂಬ ನಕ್ಷತ್ರಗಳು
ಅರಳಿವೆ ಸುಗಂಧಿ ಅಂಗಳದಲಿ
ಮಿನುಗಿವೆ ಅವಳ ಕಣ್ಣುಗಳು.

ನಿರಂತರ ಚಲನೆಯ ದಾರಿ
ಮೂಡಿದ ಹೆಜ್ಜೆ ಗುರುತುಗಳು
ಅಳಿಸಿವೆ ಅವನ ನೆನಪು
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...