Home / ಕವನ / ಕವಿತೆ / ಮಧುಚಂದ್ರ

ಮಧುಚಂದ್ರ

ಪಡುವಲದೊಡೆಯ ಪೂರ್ಣಿಮೆಯಿನಿಯ
ಬೆಳಗಽನ್ನು ಸುಯ್ದಾ,
ಬೆಳ್ಳಿಯ ಬೆಳಗನ್ನು ಸುಯ್ದಾ,
ಬಾನಲಿ ಮೊಳೆದು ಮೆಲ್ಲಗೆ ಬೆಳೆದು
ಇಳೆಯಲ್ಲಾ ಕಾಣ್ದಾಽ
ಪೂರ್ಣಿ ಇಳೆಯಲ್ಲಾ ಕಾಣ್ದಾ

ಅಮೃತದ ರಸದಾ ಚಿಲುಮೆಯಿಂದಽ
ಭರಭರನೇ ಸುರಿದು
ತಾನೇ ಭರ ಭರನೇ ಸುರಿದು
ಧಗ ಧಗಿಸಿರುವ ಧರಿಣಿಗೆ ತಂಪ
ಸರ ಸರನೇ ತರುವಽ
ತಾನೇ ಸರ ಸರನೇ ತರುವಾಽ

ಗಿರಿಗಳ ಮೇಲೆ ಕಾನನದೊಳಗೆ
ಶೃಂಗಾರದ ಹಾಸು,
ಕಂಡಿತು ಶೃಂಗಾರದ ಹಾಸು,
ಹಾಸಿರುವವರಾರು ಬಾನೆತ್ತರದಿಂ
ದಿಲ್ಲಿಗೇ ತಂದುಽ
ಈಗ ಇಲ್ಲಿಗೇ ತಂಧೂಽ

ಕಾಮನೆ ಬಯಕೆಯ ಮನದಲಿ ತರುವ
ವಿರಹದ ಬೇಗೆಯನುಽ
ತನುವಲಿ ವಿರಹದ ಬೇಗೆಯನು
ಪ್ರಣಯಿಗಳಿಗೆ ಉನ್ಮಾದವ ತರುವ
ತಂಬೆಳಕಿನ ಮಾಲೆ
ಮಿಲನದ ತಂಬೆಳಕಿನ ಮಾಲೆ

ಕಾಡಿನ ಮಧ್ಯದ ಸೆರಗೊಳಗಿಂದ
ಖಗ ಮಿಗದಽ ನಲಿವುಽ
ಕೇಳಿತು ಖಗಮೃಗದಾ ನಲಿವು
ಜೀವ ಸಂಕುಲಗಳ ಚಂದದ ಉಲಿವು
ಮಧು ಚಂದ್ರದ ಹಾಡು
ಹಾಡಿತು ಮಧು ಚಂದ್ರದ ಹಾಡು |

ಕಲೆತವು ತನುವುಽ ಬೆರೆತವು ಮನವುಽ
ಮರೆಸೀತುಽ ಇರವುಽ
ಸುಖದಲಿಽ ಮರೆಸೀತು ಇರವು
ಚಂದನ ಪರಿಮಳ ಹರಡುತ ಬಂತು
ತಂಗಾಳಿಯುಽ ಜೊತೆಗೆ
ಹರ್ಷದ ತಂಗಾಳಿಯು ಜೊತೆಗೆ |

ನಾಚಿದ ನಾಚಿಕೆ ದೂರ ಸರಿಯಿತು
ರತಿ ಮನ್ಮಥರಽಮಿಲನ
ಶೃಂಗಾರದ ಶಿವ-ಶಿವೆಯರಽ ಮಿಲನ
ಪ್ರೇಮ ಜಲಧಿಯ ತೆರೆಯಬ್ಬರದಿ
ಗೇಹ-ದೇಹದ ಸಮ್ಮಿಲನ
ಮರು ಹುಟ್ಟಿನ ಜೋಗುಳ ತೋಂ… ತನನನ… |
(ವರಕವಿ ಬೇಂದ್ರೆಯವರ ಮೂಡಲ ಮನೆಯಾಽ…. ಕವಿತೆಗೆ ಗೌರವದಿಂದ)
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...