Home / ಕವನ / ಕವಿತೆ / ನಿವೇದನೆ

ನಿವೇದನೆ

ಕಾರುಣ್ಯದಾ ಬೆಳಕೆ ಬಾ ಬೇಗ ಬಾ
ನನ್ನೆದೆಯ ಬಾಂದಳವ ಬೆಳಗಿಸಲು ಬಾ
ನಿನ್ನಲ್ಲಿ ಆನಿಂದು ಬೇಡಿಕೊಳ್ಳುವೆ ನಿನ್ನು
ಕೃಪೆಯಿಟ್ಟು ಆಲಿಸೆನ್ನೀ ಮೊರೆಯನ್ನು

ಮುಗಿಲಗಲ ಜಗಕೆಲ್ಲ
ರಸವೃಷ್ಟಿ ಸುರಿಸು,
ರವಿ ಶಶಿ ತಾರಾಹೊಳಪನ್ನು
ನಮ್ಮ ಕಣ್ಣುಗಳೊಳಗಿರಿಸು,

ಮೇದಿನಿಯ ಕಣ ಕಣದಲ್ಲೂ
ಫಲ ಫಲದೆನೆಯ ನಿರಿಸು,
ಜೀವ, ಜೀವ ಸಂಕುಲಕೆಲ್ಲ
ಉಲ್ಲಸದ ನೆಮ್ಮದಿಯ ಹರಸು,

ನದಿ ನದದ ಜುಳ ಜುಳದ
ಸಿರಿ ಬತ್ತದಂತಿರಿಸು,
ಅಂಬುಧಿಯ ಸಡಗರವ
ಜೀವಿತದಿ ಬೆರೆಸು,

ಪ್ರಾಣ ವಾಯುವಿನಲೆಯಲ್ಲಿ
ಸಂಜೀವಿನಿಯನಿರಿಸು
ಸುಮಸುಮದ ನಂದನದ
ಚೆಲ್ವ ಬಾಳ್ವೆಯಲಿ ಬೆರೆಸು

ಹಾರೋಹಕ್ಕಿಯ ಪಂಜರದ
ಪಾರತಂತ್ರ್‍ಯ ಧಿಕ್ಕರಿಸು
ಜಗದ ಜನಮನಕೆಲ್ಲ ಮುದದ
ಸ್ವಾತಂತ್ರ್‍ಯ ಕೊಡಿಸು

ಕ್ರೂರ ಕ್ರೌರ್ಯ ಮೃಗದ ರಣ
ದ್ವೇಷವನು ದಹಿಸು,
ಪ್ರೀತಿ ವಾತ್ಸಲ್ಯ ನೇಹ ಸಗ್ಗವನು
ಬಿತ್ತಿ ಬೆಳೆಸುತಾ ಬೆಸೆಸು.

ದುರಾಸೆಯಾಸೆಗಳಗ್ಗಳದ
ಕುತಂತ್ರವನೆ ಕೆಡಿಸು,
ಶ್ರಮದ ಅನ್ನವ ಸಮದಿ
ಉಣ್ಣುವುದ ತಿಳಿಸು.

ಶಸ್ತ್ರ ಶಾಸ್ತ್ರದ ಭಯದ
ಭೀತಿಯನು ಬಿಡಿಸು,
ವರ್ಣ ವರ್ಣದ ವರ್ಗ
ಕ್ಷುದ್ರತೆಯ ನಳಿಸು

ರಂಗು ರಂಗಿನರಂಗು
ಬೆಳ್ಮುಗಿಲ ರಂಗಿನ ಸೊಗಸು
ಭಿನ್ನ ಭಿನ್ನದ ಜನದ
ದೇಹ-ಗೇಹ ಒಂದೆಂದು ತಿಳಿಸು

ಆ ಧರ್ಮ ಈ ಧರ್ಮ ಕರ್ಮ
ಮೌಢ್ಯ ನಿಯತಿಗಳನಳಿಸು
ಈ ವಿಶ್ವ ವೀದೇಶ ನಾಡು ನುಡಿ
ನಿಜ ಧರ್ಮ ಸಾರ ತಿಳಿಸು

ಮತ ಪಥದ ಕುಲ ಕುಲದ
ಹುಚ್ಚು ಸಹವಾಸ ಬಿಡಿಸು
ಮಾನವತೆಯರಿವರಿವು
ನೆಚ್ಚಿ ಬದುಕಲೋಲೈಸು

ಗುಡಿ ಚರ್ಚು ಮಸೀದಿ ಬಸದಿಗಳ
ಕಟ್ಟುವುದ ಬಿಡಿಸು
ನಮ್ಮ ನಿಮ್ಮಯ ನಿಜ ತಿಳಿವು
ದೇವರಿರವೆಂದು ಕಲಿಸು.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...