Home / ಕವನ / ಕವಿತೆ / ಅಂತರಾಳ

ಅಂತರಾಳ

ನಾನು ಹೆಣ್ಣು ಯುಗದ ಕಣ್ಣು
ದಾತ ದಾತನ ದಾತೆಯು,
ಮುಗಿಲಿನೆದೆಗೂ ಮಿಗಿಲು ನಾನು
ವಿಶ್ವ ಸೃಷ್ಟಿಯ ತಾಯಿಯು,
ಕಡಲ ಒಡಲಿನಾಳದಾಳ ನಾನು
ಜಗದ ಜೋಗುಳ ಗೀತೆಯು |

ಉರಿಯು ತಂಪು ತಾರಾ ಮಿಣುಪು
ಸಗ್ಗ ಋತುವಿನ ಸೋನೆಯು,
ಶೃಂಗ ಶೃಂಗದ ಶೃಂಗ ನಂದನ
ಭೃಂಗದೆದೆಯ ಮಿಡಿತವು,
ದಟ್ಟ ಝರಿ ವನ ಬನ ರಾಜಿ ನಾನು
ಧಮನಿ ಧಮನಿಗೂ ರುಧಿರವು |

ಇರದ ದೇವರನಿರವ ರೂಪಿನ
ತ್ಯಾಗ ಭೋಗ ಭಾಗ್ಯದ ಭರಣಿಯು,
ಬಿತ್ತು ಬಿತ್ತಿಗೆ ರೂಪ ರೂಹನು
ತಿದ್ದಿ ತೀಡೋ ಭ್ರೂಣ ಲತಿಕೆಯು,
ಪುರುಷ ನಿನಗೆ ಪ್ರಕೃತಿ ನಾನು
ಉಳಿವು ಬೆಳೆವಿನ ನಿಯತಿಯು |

ಅಂದು ಇಂದು ಹಿಂದೆಂದಿನಿಂದೋ
ಬಂಧ ಬಂಧದ ದಿಗ್ಭಂಧನ
ಸೃಷ್ಟಿ ದಿಟ್ಟಿಯ ಪುರುಷ ನಿನ್ನಯ
ಕೈಯಲುಗಿನೆದೆಯ ಚಂದನ
ಪಡೆದ ಕೊಸರೊಲವ ಋಣಿಯು ನಾನು
ತೆರುವ ವಡ್ಡಿ ಚಕ್ರದ ದಾಳವು |

ಆವ ಮನುವಿನ ಸ್ಮೃತಿ ವಿಸ್ಮೃತಿಯೋ
ಸೆಲೆಯ ಬಲೆಯ ಜಾಲವೊ
ಆವಕ್ಕರದಕ್ಕರಕೂ ನನ್ನ ನೆತ್ತರೆ ಶಾಯಿಯು
ವ್ಯಕ್ತಾವ್ಯಕ್ತ ಭೀತಿಯ ಛಾಯೆಯು
ಬರೆದ ಬರಹದ ಹೊಗೆಯ ಹಗೆಯ ನೀನು
ನನ್ನ ಬಸಿರ ಪ್ರಸೂತನು |

ಸುರತಿ ಸುಖದಾ ಬಯಲ ಬತ್ತಲೋ
ಹುತ್ತ ಹೊಕ್ಕ ಶುಕ್ರನ ಧಾರಿಣಿ
ವಿರತಿ ಶೃತಿಗೂ ರಾಗರತಿಯನುರಾಗಿಯು
ಒಲವ ಹೂಮಳೆ ಶೃಂಗಾರಿಣಿ
ಹುಟ್ಟು ಬೆಳೆವು ಮುಳುಗಟ್ಟು ಕಟ್ಟ ಬಟ್ಟೆ ನಾನು
ಭಾವ ಶೂನ್ಯ ಜನದೆದೆ ಜಗದಲಿ |

ಯಶದ ಯಶದಾಧಾರ ಧಾರ ತೊರೆಯು
ಯಶವಂತನಾ ಬೆನ್ನ ನೆರಳಲಿ
ಶೂದ್ರಸ್ಪುಶ್ಯ ಮೋಹ ಕಾಮಿ ಮಾಯೆಯು
ಕ್ರೂರ ಪುರುಷ ಕಲ್ಪದ ಸರಳಲಿ
ರಸದ ಜನನಕೆ ವಿರಸ ಮರಣಕೆ
ಸಮರಸದ ಬದುಕಿನ ದೀಪ ಕನ್ನಿಕೆ |
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...