Home / ಕವನ / ಕವಿತೆ / ಶರಣ ಪಥ

ಶರಣ ಪಥ

ಎಣ್ಣೆ ದೀವಿಗೆ ಹಿಡಿದು ಪಥವನರಸುವ ವೀರ
ತಿಳಿಯಲಾರೆಯಾ ತಿಂಗಳನ ಬೆಳಕು ?
ಸವಿಯ ತಂಗಿರಣ ಛಾಯೆಗಂಜಿಹುದು ತಿಮಿರ !
ಬಾ ಇಲ್ಲಿ ಕಂಡಿಹುದು ದಿವ್ಯ ಬೆಳಕು!

ಭಕ್ತಿ ಬಾನಿನ ತಿಲಕ ಚಂದಿರನು ಬಸವಣ್ಣ
ಆ ಶರಣ ಸಾತ್ವಿಕತೆಯ ಸವಿಯ ಬಾ
ಲಾಸ್ಯ ಲಾವಣ್ಯದ ಲೀಲಾ ಬಲೆಗೆ ನೀನು
ಬಲಿಯಾಗದೇ ಭಾಗ್ಯವರಸ ಬಾ

ಮಿಂಚಿ ಬಂದಿಹವು ಮಾಯಜಾಲದ ಹಕ್ಕಿಗಳು
ಬಣ್ಣ ಬಲುಚಂದ; ನಾದ ಅಂದ
ಹಿಡಿಯಲೆಳಸಿ ಬೆಂಬತ್ತಿದೊಡೆ ಬಾಳು ಹಾಳು
ಕೇಳಿ ತಿಳಿದೇಳು ಶರಣರಿಂದ

ಶ್ಯಾಮವರ್ಣದ ಮಾಯ ಮುಗಿಲಿನಲಿ ಮಿಂಚಾಗಿ
ಚಿಮ್ಮಿಯದ್ದಳದೋ ಮಹದೇವಿಯಕ್ಕ
ಕಾರಿರುಳ ಕರಗಿಸಿ ಸಿಡಿವ ಕಡು ಸಿಡಿಲಾಗಿ
ಬಡಿದಳದೋ ಕಾಡಿಗೆ ಎಮ್ಮ ಭಾಗ್ಯದಕ್ಕ

ಸತ್ಯ ಮಿಥ್ಯದ ಘೋರ ರೌದ್ರ ರಣವು
ಬೆಳಕು ಕತ್ತಲೆಯ ವೀರ ಬಣವು
ನಮ್ಮ ಶರಣವೃಂದದ ಭಕ್ತಿ ಕಹಳೆ ಕೂಗಿದವು
ಶರಣರಿಗಿದಿರಾದ ಅಸುರರಿನ್ನಾವು?

ಮೌಡ್ಯ ಜಾಡ್ಯದ ಜಾಲ ಆವರಿಸಿ ನಿಂದಾಗ
ಬಂದರದೋ ಅವತಾರಿ ಅಲ್ಲಮರು
ಕಲ್ಯಾಣ ಮೇಲೆದ್ದು ; ಶೂನ್ಯಸಿಂಹಾಸನ ನಿಂದಾಗ
ಕ್ರೌರ್ಯ ತಿಮಿರದ ರೌದ್ರ ಶಾಂತ ಮಾಡಿದರು

ಸಾಸಿರಕು ಮಿಗಿಲಾದ ಲಿಂಗದೇವನ ದೂತರು
ಬಂದು ನಿಂದಾಗ ಬಸವಳಿದ ನೀನಾರು?
ದಾರಿಯರಿಯದ ನಿನಗೆ ಕಾದುನಿಂದಾಗ ಶರಣರು
ಎಣ್ಣೆದೀವಿಗೆ ಹಿಡಿದ ಧೀರ ಇನ್ನಾರು ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...