Home / ಕವನ / ಕವಿತೆ / ಜೀವನದ ರೂಪನ್ನೆ ಬದಲಿಸುವ, ಬಾ!

ಜೀವನದ ರೂಪನ್ನೆ ಬದಲಿಸುವ, ಬಾ!

ಕೈಯ ಕೈಯಲಿ ಇಟ್ಟು
ಕಣ್ಣ ಕಣ್ಣಲಿ ನಟ್ಟು
ಮುಂದಕ್ಕೆ ಸಾಗೋಣ, ನೋಡೋಣ ಬಾ;
ನಾನು ನೀನೂ ಕೂಡಿ
ವಿಧಿಯೊಡನೆ ಹೆಣಗಾಡಿ
ಜೀವನದ ರೂಪನ್ನೆ ಬದಲಿಸುವ, ಬಾ!

ನದಿಯ ತಣ್ದುಟಿ ಮೇಲೆ
ಶಶಿಯ ಒಲವಿನ ಓಲೆ
ಕೊರೆಸಿ ಕುಣಿವುದನು ಓದೋಣ ಬಾ;
ಬಾಳಿನಂಗಳದಲ್ಲಿ
ಸಾವ ಪಂಜರದಲ್ಲಿ
ಅಳಿದುಳಿದ ಕುಲವನ್ನು ಕಾಣೋಣ, ಬಾ!

ನಾಡ ಸುತ್ತಲು ಸುತ್ತಿ
ಹಾಡ ಮಿಂಚಿನ ಕತ್ತಿ
ಝಳಪಿಸುತ ಇರುಳನ್ನು ಇರಿಯೋಣ ಬಾ;
ನಾನು ನೀನೂ ಕೂಡಿ
ಜೀವನವ ಜಾಲಾಡಿ
ಹುದುಗಿರುವ ಮುತ್ತನ್ನು ಆಯೋಣ, ಬಾ!

ಸಿರಿಯ ಸಂತಸ ಕೂಟ,
ಹೊರೆಯ ಸಿಂಗರ ಮಾಟ,
ಮರೆಯ ಹೆಣ್ಣಿನ ಬೇಟ, ಕಾಣೋಣ ಬಾ;
ಅದಕೆ ಜೀವವ ತೆತ್ತ
ಲೆಕ್ಕವಿಲ್ಲದ ಮೊತ್ತ
ಜನರ ಜೀವನವನ್ನು ಎಣಿಸೋಣ, ಬಾ!

ನಾಡ ಬಿಡುಗಡೆಗಾಗಿ
ಓಡ ಅರಳುಗಳಾಗಿ
ಬಾಡಿರುವ ಹೂಗಳನು ಆಯೋಣ ಬಾ;
ಅವರ ಜೀವನದ ನಾಡಿ
ಸಿಡಿಲ ನದಿಗಳ ಕೋಡಿ
ಕೊಚ್ಚಿಸುತ, ಕ್ರಾಂತಿಯನು ಹರಡೋಣ, ಬಾ!

ಜಗವೆ ತನ್ನದು ಎಂದು,
ಕದ್ದು ಎಲ್ಲವ ತಂದು
ಕೂಡಿಟ್ಟ ಕಳ್ಳನನು ಅಳಿಸೋಣ ಬಾ;
ತನ್ನ ಬಾಳ್ವೆಯ ತೆತ್ತು,
ತಾನೆ ಉಳಿದರ ತೊತ್ತು
ಆಗಿ ಅಳಿಯುವ ಜೀವ ಉಳಿಸೋಣ, ಬಾ!

ಅವರ ಕೊನೆಯಿದು ಅಲ್ಲ,
ಇದು ಬರಿಯ ಉರಿಯಲ್ಲ,
ನಾಡಿನೆದೆಗಿಚ್ಚೆಂದು ಅರಿಯೋಣ ಬಾ;
ನಾನು ನೀನೂ ಕೂಡಿ
ಒಲವ ಹಾಡನು ಹಾಡಿ
ಜೀವನದ ರೂಪ, ಬದಲಿಸುವ ಬಾ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...