Home / ಕವನ / ಕವಿತೆ / ಚಂದ್ರ ಚಕೋರಿ

ಚಂದ್ರ ಚಕೋರಿ

ಇರುಳಿನ ಮಡಿಲಲಿ ಒಲವಿನೊಂದು ಮನ-
ದಾಸೆಯ ನನಸಂತೆ,
ಆಗಸದೊಡಲಲಿ ಚಂದಿರ ನಗುತಿರೆ,
ಜೀವನೆ ಕನಸಂತೆ!

ಒಂದು ಚಕೋರಿಯು ಚಂದಿರನೊಲವನು
ಪಡೆಯಲಂದು ಮನವ
ಭಾವ ಪುಷ್ಪಗಳ ಪರಿಮಳವಾಗಿಸಿ
ಹರಿಸಿತು ಎದೆಯೊಲವ

ಹಕ್ಕಿ ಚಂದಿರನ ಸನಿಯ ಸಾರಲಿಕೆ
ಚಿಮ್ಮಿ ಹಾರುತಿಹುದು.
ಒಲವಿನ ಎಣೆಯಿಲ್ಲದ ಸುಖದಾಸೆಯು
ಸ್ಫೂರ್ತಿಯನಿತ್ತಿಹುದು.

ಹಾರಿ ಹಾರಿ, ಸರಿ ಸಾರಿ ಬೀಳುತಿರೆ,
ಹಕ್ಕಿ ನೋಡಿತಲ್ಲಿ,
ಇರುಳನಲ್ಲ ತನ್ನೊಲವ ಚಂದಿರನು
ಹಗಲ ಹಿಡಿತದಲ್ಲಿ.

ತನ್ನೆದೆಯೊಲವಿನ ಆಸೆಯೆಲ್ಲ ಹುಸಿ
ಹುಡಿಯ ಗುಡ್ಡೆಯಾಗಿ,
ಹಕ್ಕಿ ಚಿಂತಿಸಿತು ಇನಿಯನ ಜತೆಯನು
ಸೇರುವ ಬಗೆಗಾಗಿ.

ಸುಖ ಸಂತೋಷದಿ ನೋಡಿತೊಂದು ಕಿಡಿ
ಬೆಂಕಿ ಮಸಣದಲ್ಲಿ;
“ಇದರ ಉಡಿಯೊಳೆನ್ನೆದೆಯ ನೀಗುವೆನು,
ಉಳಿವೆ ಬೂದಿಯಲ್ಲಿ.

ಮುಂದಕೊಂದು ದಿನ, ಶಿವನು ಈ ಕಡೆಗೆ
ಬಂದೆ ಬರುವನಂದು,
ಚಿತೆಯ ಭಸ್ಮವನು ಕೈಯಲೆತ್ತಿ ಹರ
ಹಣೆಗೆ ಇಡುವ ನಿಂದು.

ಶಂಕರ ಶಿರದಲಿ ರಾಜಿಸುತಿಹನದೊ,
ಇನಿಯನವನ ಬಳಿಗೆ
ಚಿತೆಯ ಭಸ್ಮದಲಿ ಸಾರಿ ಸೇರುವೆನು,
ತ್ಯಾಗ ಒಲವ ನೆರಿಗೆ.”

ಎನುತ ಹಕ್ಕಿ ಹಾರಿತ್ತು ಬೆಂಕಿಯಲಿ,
ಮೂರೆ ಗಳಿಗೆಯಲ್ಲಿ
ಜೀವ ಹಾರಿರಲು, ರವಿಯು ಉದಿಸಿದನು
ಬಾಳ ಮೂಡಲಲ್ಲಿ!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...