Home / ಕವನ / ಕವಿತೆ / ಕಳೆದು ಹೋದೆಯಲ್ಲೇ

ಕಳೆದು ಹೋದೆಯಲ್ಲೇ

ಲಕ್ಷ್ಮೀಽ ಕಳೆದುಹೋದೆಯಲ್ಲೆ Megesticನಲ್ಲಿ
ಲಕ್ಷ್ಮೀ ಕಳೆದುಹೋದೆಯಲ್ಲೆ ಮ್ಯಾಜೆಸ್ಟಿಕ್‌ನಲ್ಲಿ
ಮೊನ್ನೆ ಮೊನ್ನೆಯಷ್ಟೇ ಅದೇ ದೀಪಾವಳಿಯಂದು
ಗರಿಗರಿಯಾದ ಸೀರೆಯುಟ್ಟು
ನನ್ನ ಮನೆಗೆ ಬಂದಿದ್ದೆಯಲ್ಲೆ
ಲಕ್ಷ್ಮೀ ಕಳೆದು ಹೋದೆಯೆಲ್ಲೆ…

ಮೊನ್ನೆ ರಾಜ್ಯೋತ್ಸವದಂದು ನಿನಗೂ
ಭುವನೇಶ್ವರಿಗೂ ಒಂದೇ sweet ಮಾಡಿದ್ದೆ
ಅದಕ್ಕೇನಾದರೂ ಸಿಟ್ಟುಮಾಡಿಕೊಂಡೆಯೋ!
ಕಳ್ಳರ ಕಾಟ ಜಾಸ್ತಿ ಎಂದು ಒಂದೆಳೆ
ಸರದ ಮೇಲೆಯೇ ನಿನ್ನ ಪೂಜಿಸಿದ್ದೆ
ಅದಕ್ಕೇನಾದರೂ ಬೇಸರ ಪಟ್ಟುಕೊಂಡೆಯೋ!
ಎಲ್ಲವೂ ನಿನ್ನದೇ ಅಂದೆ
ಸ್ವಲ್ಪ ನಿರ್ಲಕ್ಷಿಸಿದ್ದೇನೋ ನಿಜ
ಆದರೆ ಇಂದು ಒಮ್ಮಿಂದೊಮ್ಮೆಲೆ
ನನ್ನ ಮರೆತು Megesticನಲ್ಲಿ ಇಳಿದು ಬಿಡುವುದೇ
ಲಕ್ಷ್ಮೀ ಕಳೆದುಹೋದೆಯಲ್ಲೆ…..

ನೀನು ಅದೆಷ್ಟು ಚೆಂದ ಅಂದ ಆಕರ್ಷನೀಯಳು
ಆಘಾತವಾಗದಂತೆ ಕಾಯುತ್ತಲೇ ಇದ್ದೆ
ನೀನು ಹೀಽಗೆ ತುಂಬಾ ಚಂಚಲಿ
ನೀನು ನಿನ್ನ ಹಾಗೆಯೇ,
ನಿನ್ನ ಕಳೆದುಕೊಂಡ ನನ್ನ ಮನ ಮೌನವಾಯಿತು
ಬೆವರು ಬೆನ್ನಕಾವಲಿಗೆ ಇಳಿಯಿತು
ಗೊತ್ತಾಗಲೇ ಇಲ್ಲ ನೋಡು ನನಗೆ ನೀನು
ಇದ್ದಕ್ಕಿದ್ದ ಹಾಗೆ ಒಮ್ಮೆಲೇ ತಪ್ಪಿಸಿಕೊಳ್ಳುವಿಯೆಂದು
ಒಂದಿಷ್ಟೇನಾದರೂ ಸಂಶಯ ಬಂದಿದ್ದರೆ
ಕೈಯಲ್ಲಿ ಕೈ ಹಿಡಿದು ನಡೆಯುತ್ತಿದ್ದೆ
ಲಕ್ಷ್ಮೀ ಕಳೆದುಹೋದೆಯಲ್ಲೆ….
ಪ್ರವಾಸಿಗರೇ ತುಂಬಿದ Megesticನಲ್ಲಿ
ಕಳ್ಳರ ಹಾವಳಿಗೆ ತುತ್ತಾಗಿ ದಿನ ದಿನವೂ
ಮೌಲ್ಯವೇ ಕಳೆದುಕೊಳ್ಳುತ್ತಿರುವೆಯಲ್ಲೆ….
ಹಾಯಾಗಿ ಬದುಕಲೂ ಬಿಡದ ಬೆಂಗಳೂರಿನಲ್ಲಿ
ನೀನು ಬದುಕುತ್ತಲೇ ಕಳೆದುಕೊಳ್ಳುತ್ತಿದ್ದಿಯಲ್ಲ
ಬಡವರ ಕನಸಿಗೆ ಕೊಳ್ಳಿ ಇಡುತ್ತಾ
ಸಿರಿಗರವ ಹೊಡೆದವರಲ್ಲೇ ಇರುವೆನೆನುತ
ಕುಡಿತಗಳ ಜನರ ನಡುವೆಯೇ
ಹೊರಳಾಡುತ್ತ ನೆರಳಾಡುತ್ತ
ಬೆಲೆಯೇ ಕಳೆದುಕೊಳ್ಳುತ್ತಿರುವಿಯಲ್ಲ ಲಕ್ಷ್ಮಿ
ಬಾಗಿಲು ತಟ್ಟಿ ಬರುವವಳಲ್ಲ ನೀನು
ಬಾಗಿಲು ಒದ್ದು ಹೋಗುವುದು ಮಾತ್ರ ಗೊತ್ತು
ಅದಕ್ಕೆಂದೇ ನೀನು ಚಂಚಲೆ ಲಕ್ಷ್ಮಿ
ಲಕ್ಷ್ಮಿ ಕಳೆದುಹೋದೆಯಲ್ಲೆ.

(Megesticನಲ್ಲಿ ಇತ್ತೀಚೆಗೆ ಸಾವಿರಾರು ರೂಪಾಯಿ ಕಳೆದುಕೊಂಡಾಗ, ವಾರವಿಡೀ ಆ ಬೇಸರದಲ್ಲಿಯೇ ಇದ್ದಾಗ ಬರದದ್ದು)
*****

Tagged:

Leave a Reply

Your email address will not be published. Required fields are marked *

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...