Home / ಕವನ / ಕವಿತೆ / ಭೂತ – ಪ್ರೇತಗಳಿಗೊಂದು ಸವಾಲು

ಭೂತ – ಪ್ರೇತಗಳಿಗೊಂದು ಸವಾಲು

ಒಂಽದ ಕಾಲಕ್ಕೆ ದೆವ್ವ- ಭೂತ – ಪ್ರೇತ ಅಂದ್ರ
ಅಮವಾಶಿ ಕತ್ತಲು – ಸ್ಮಶಾನ, ಓಣಿಯೊಳಗ
ಯಾರರ ಸತ್ತರ ನೆನಪಾಗತ್ತಿತ್ತು
ಬಹುಷಃ ಆಗಿನ ವಯಸ್ಸೂ
ಹಾಂಗಽಇತ್ತು
ಆದರ ಈಗ –

ಈ ವರ್ತಮಾನದ ದೆವ್ವಗೋಳು
ಜನರ ರಕ್ತಾ ಹೀರಿ ಕುಡಿದು
ಕುಕ್ಕರಿಸಿ ಇಟ್ಟು
ಎದಿ ನಡಗೋ ಹಾಂಗ ಮಾಡೋಕ್ಹತ್ತಾವ

ಹಾಡೇ ಹಗಲಽ ಖಜಾನೆ ಒಡೆಯೋದು
ಮೋಸ ಅತ್ಯಾಚಾರ ಮಾಡೋದು
ಬೂದಿ ಮುಚ್ಚಿದ ಕೆಂಡ ಅಲ್ದಽ ಇನ್ನೇನು,

ಭೂತಕಾಲದ ಭೂತಕ್ಕ ಕಾದ ಕಬ್ಬಿಣದ ಬಾರು (ಸಳಿ)
ತೋರಿಸಬಹುದು, ಆದರಽ
ಈ ವರ್ತಮಾನದ ಭವಿಷ್ಯದ ಭೂತಗಳಿಗೆ
ಸರ್ಕಸ್ಸದ ರಿಂಗ್ ಮಾಸ್ಟರನ ಬೇಽಕ ಬೇಕು

ಪಾಪ! ಅನ್ನೋ ಹಾಂಗ ಸೋಗ ಹಾಕಿ-
ತಿರುಗಬೇಡ, ಇನ್ನ ಹುಟ್ಟತ್ತಾಽರ
ಹಾದಿ ಹಾದಿಗೆ ರಿಂಗ್ ಮಾಸ್ಟರಗೋಳ
ನಿನ್ನ ಆಡಿಸ್ತಾರ, ನಿನ್ನೆದಿ ಸೀಳತಾಽರ
ತಂಪ ನೀರು ಸಿಡಿಸಿ ನಗತಾರ
ನಿನ್ನ ಜಗತ್ತಾರ

ನಿನ್ನ ಚಪ್ಪಲಿಯಿಂದ ನಿನಗಽಹೊಡೆದ
ಮಿಂಚೋ ಝರಿಯೊಳಗ ಮುಚ್ಚಿ
ಸಿಹಿ ತಿಂತಾರ

ಕಂಟೆಯೊಳಗಿಂದ ಎದ್ದ
ರಾತ್ರಿ ನೀನು ಕುಣಿದರೂ
ಗ್ಯಾಸ್‌ಲೈಟ್‌ಗೆ ಅಂಜತೀಯಪಾ
ಕೊನೆಗೆ ನಿನ್ನ ಕತ್ತಲನಽ
ಎಳಕೊಂಡು ಜಿರಿ ಜಿರಿ ಹುಳಾ ಹುಪ್ಪಡಿಗೋಳ
ಸಂಗೀತ ನಿರ್ದೇಶನದಾಗ ನೀ ಕ್ಯಾಬರೆ ಮಾಡಲೆ

ಕಪ್ಪು ಬಿಳುಪಿನ ಬೆಳಕಿಗೆ ಹೊಂದಿಕೊಳ್ಳಾಕ
ತಯಾರಾಗಕ್ಹಂತ್ತಾಂಗಽ
ಬೆಳಗಿನ ಸೂರ್ಯ ಹುಟ್ಟೇಽಬಿಡ್ತಾನ
ಆಗ ನೀನು ಕುಕ್ಕರಿಸಿ ಬೀಳತಿ
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...