Home / ಕವನ / ಕವಿತೆ / ಚೈತನ್ಯ ಸೆಲೆ ಶಿಷ್ಯ

ಚೈತನ್ಯ ಸೆಲೆ ಶಿಷ್ಯ

ಹೊಸ ಜಗತನ್ನು ಸೃಷ್ಟಿಸುವ ಶಿಲ್ಪಿಯಾಗಿದಿ
ವಿದ್ಯೆ ಎಂಬ ಅವಿನಾಶಿ ಅಮೃತ ಪಡಕೊಂಡಿದಿ
ಖಡ್ಗಕ್ಕಿಂತ ಮಿಗಿಲಾದ ಅಸ್ತ್ರ ಹಿಡಕೊಂಡಿದಿ
ಗಜಮುಖನಂತೆ ವಿದ್ಯೆಯ ಸಾಗರನಾದಿ.

ಅಜ್ಞಾನವೆಂಬ ಕತ್ತಲೆಯ ಕಳಕೊಂಡಿದಿ
ಸುಜ್ಞಾನವೆಂಬ ಬೆಳಕು ನೀ ಪಡಕೊಂಡಿದಿ
ಭಾವಿ ಜೀವನದ ಅಮರ ಜ್ಯೋತಿಯಾಗಿದಿ
ಅವಗುಣಗಳೆಂಬ ಬೇರು ಅಳಿಸಿಕೊಂಡಿದಿ.

ಗುರುವಿನ ಕಷ್ಟವನು ನೋಡಿ ಮರುಗಿದಿ
ಕಷ್ಟದಲ್ಲಿ ಗುರುವಿಗೆ ಸಹಾಯಕನಂತೆ ಎದೆತಟ್ಟಿ ನಿಂತಿದಿ
ಗುರಿ ಮುಟ್ಟಿಸುವುದಕ್ಕೆ ಸತತ ಸಹಾಯ ಮಾಡಿದಿ
ಗುರುವಿನ ಜಯ (ಮೋಕ್ಷ) ಕಂಡು ಸಂತಸ ಪಟ್ಟಿದಿ.

ಪರರ ಸುಖವನ್ನು ಕಂಡು ಹರ್ಷಿತನಾಗಿದಿ
ಪರರ ಕಷ್ಟದಲ್ಲಿ ಸಹಭಾಗಿಯಾಗಲು ಧೈರ್ಯದಿಂದ ನಿಂತಿದಿ
ನೀತಿ ಮಾರ್ಗದಿ ಕೀರ್ತಿಗಳಿಸಬೇಕೆಂದು ಬಯಸಿದಿ
ಸುವಿಚಾರ ಕಲಿತು ಸುಹೃದಯಿ ಆಗಿದಿ.

ಒರಟು ಕಲ್ಲನ್ನು ಕೆತ್ತಿಕೊಂಡು ಸುಂದರ ಮೂರ್ತಿಯಾದಿ
ಝಕಣಚಾರಿಯಂತೆ ಹಗಲಿರುಳು ನಿದ್ರೆಗೆಟ್ಟು ಬಳಲಿದಿ
ಗುರುವಿನ ಮನಶಾಂತಿಗೆ ಎಲ್ಲವೂ ತಿಳಕೊಂಡಿದಿ
ಯಾರು ಕದಿಯಲಾರದಂಥ ಐಶ್ವರ್ಯ ಗಳಿಸಿದಿ.

ಜಾತಿ ಮತ ಪಂಥಗಳ ಭೇದವ ಆರಿಸಿದಿ
ನಾವೆಲ್ಲರೂ ಒಂದೇ ತಾಯಿ ಮಕ್ಕಳೆಂದು ತಿಳಕೊಂಡಿದಿ
ಪ್ರಾಮಾಣಿಕತೆಗಾಗಿ ಪ್ರಾಣ ಅರ್ಪಿಸಲು ನಿಂತಿದಿ
ಅಂಧಕಾರದ ವಿರುದ್ಧ ಭಂಡೇಳಲು ಸಿದ್ಧನಾದಿ.

ಎಲೆ ಕಾಂಡದಲ್ಲಿ ಅಡಗಿದ ಹೂವಿನಂತಿರದೆ
ಎಲ್ಲರ ದೃಷ್ಟಿಗೆ ಕಾಣುವ ಕುಸುಮದಂತಾದಿ
ಗುರುವಿಗಾಗಿ ತನುಮನ ಧನವು ನೀಡಿದಿ
ಜಗವಿರುವವರೆಗೆ ಜಗಭರಿತ ಶಿಷ್ಯನಾದಿ.
*****
೦೬/೧೧/೧೯೯೭

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...