Home / ಕವನ / ಕವಿತೆ / ಚೈತನ್ಯ ಸೆಲೆ ಶಿಷ್ಯ

ಚೈತನ್ಯ ಸೆಲೆ ಶಿಷ್ಯ

ಹೊಸ ಜಗತನ್ನು ಸೃಷ್ಟಿಸುವ ಶಿಲ್ಪಿಯಾಗಿದಿ
ವಿದ್ಯೆ ಎಂಬ ಅವಿನಾಶಿ ಅಮೃತ ಪಡಕೊಂಡಿದಿ
ಖಡ್ಗಕ್ಕಿಂತ ಮಿಗಿಲಾದ ಅಸ್ತ್ರ ಹಿಡಕೊಂಡಿದಿ
ಗಜಮುಖನಂತೆ ವಿದ್ಯೆಯ ಸಾಗರನಾದಿ.

ಅಜ್ಞಾನವೆಂಬ ಕತ್ತಲೆಯ ಕಳಕೊಂಡಿದಿ
ಸುಜ್ಞಾನವೆಂಬ ಬೆಳಕು ನೀ ಪಡಕೊಂಡಿದಿ
ಭಾವಿ ಜೀವನದ ಅಮರ ಜ್ಯೋತಿಯಾಗಿದಿ
ಅವಗುಣಗಳೆಂಬ ಬೇರು ಅಳಿಸಿಕೊಂಡಿದಿ.

ಗುರುವಿನ ಕಷ್ಟವನು ನೋಡಿ ಮರುಗಿದಿ
ಕಷ್ಟದಲ್ಲಿ ಗುರುವಿಗೆ ಸಹಾಯಕನಂತೆ ಎದೆತಟ್ಟಿ ನಿಂತಿದಿ
ಗುರಿ ಮುಟ್ಟಿಸುವುದಕ್ಕೆ ಸತತ ಸಹಾಯ ಮಾಡಿದಿ
ಗುರುವಿನ ಜಯ (ಮೋಕ್ಷ) ಕಂಡು ಸಂತಸ ಪಟ್ಟಿದಿ.

ಪರರ ಸುಖವನ್ನು ಕಂಡು ಹರ್ಷಿತನಾಗಿದಿ
ಪರರ ಕಷ್ಟದಲ್ಲಿ ಸಹಭಾಗಿಯಾಗಲು ಧೈರ್ಯದಿಂದ ನಿಂತಿದಿ
ನೀತಿ ಮಾರ್ಗದಿ ಕೀರ್ತಿಗಳಿಸಬೇಕೆಂದು ಬಯಸಿದಿ
ಸುವಿಚಾರ ಕಲಿತು ಸುಹೃದಯಿ ಆಗಿದಿ.

ಒರಟು ಕಲ್ಲನ್ನು ಕೆತ್ತಿಕೊಂಡು ಸುಂದರ ಮೂರ್ತಿಯಾದಿ
ಝಕಣಚಾರಿಯಂತೆ ಹಗಲಿರುಳು ನಿದ್ರೆಗೆಟ್ಟು ಬಳಲಿದಿ
ಗುರುವಿನ ಮನಶಾಂತಿಗೆ ಎಲ್ಲವೂ ತಿಳಕೊಂಡಿದಿ
ಯಾರು ಕದಿಯಲಾರದಂಥ ಐಶ್ವರ್ಯ ಗಳಿಸಿದಿ.

ಜಾತಿ ಮತ ಪಂಥಗಳ ಭೇದವ ಆರಿಸಿದಿ
ನಾವೆಲ್ಲರೂ ಒಂದೇ ತಾಯಿ ಮಕ್ಕಳೆಂದು ತಿಳಕೊಂಡಿದಿ
ಪ್ರಾಮಾಣಿಕತೆಗಾಗಿ ಪ್ರಾಣ ಅರ್ಪಿಸಲು ನಿಂತಿದಿ
ಅಂಧಕಾರದ ವಿರುದ್ಧ ಭಂಡೇಳಲು ಸಿದ್ಧನಾದಿ.

ಎಲೆ ಕಾಂಡದಲ್ಲಿ ಅಡಗಿದ ಹೂವಿನಂತಿರದೆ
ಎಲ್ಲರ ದೃಷ್ಟಿಗೆ ಕಾಣುವ ಕುಸುಮದಂತಾದಿ
ಗುರುವಿಗಾಗಿ ತನುಮನ ಧನವು ನೀಡಿದಿ
ಜಗವಿರುವವರೆಗೆ ಜಗಭರಿತ ಶಿಷ್ಯನಾದಿ.
*****
೦೬/೧೧/೧೯೯೭

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...