Home / ಕವನ / ಕವಿತೆ / ಚೈತನ್ಯ ಸೆಲೆ ಶಿಷ್ಯ

ಚೈತನ್ಯ ಸೆಲೆ ಶಿಷ್ಯ

ಹೊಸ ಜಗತನ್ನು ಸೃಷ್ಟಿಸುವ ಶಿಲ್ಪಿಯಾಗಿದಿ
ವಿದ್ಯೆ ಎಂಬ ಅವಿನಾಶಿ ಅಮೃತ ಪಡಕೊಂಡಿದಿ
ಖಡ್ಗಕ್ಕಿಂತ ಮಿಗಿಲಾದ ಅಸ್ತ್ರ ಹಿಡಕೊಂಡಿದಿ
ಗಜಮುಖನಂತೆ ವಿದ್ಯೆಯ ಸಾಗರನಾದಿ.

ಅಜ್ಞಾನವೆಂಬ ಕತ್ತಲೆಯ ಕಳಕೊಂಡಿದಿ
ಸುಜ್ಞಾನವೆಂಬ ಬೆಳಕು ನೀ ಪಡಕೊಂಡಿದಿ
ಭಾವಿ ಜೀವನದ ಅಮರ ಜ್ಯೋತಿಯಾಗಿದಿ
ಅವಗುಣಗಳೆಂಬ ಬೇರು ಅಳಿಸಿಕೊಂಡಿದಿ.

ಗುರುವಿನ ಕಷ್ಟವನು ನೋಡಿ ಮರುಗಿದಿ
ಕಷ್ಟದಲ್ಲಿ ಗುರುವಿಗೆ ಸಹಾಯಕನಂತೆ ಎದೆತಟ್ಟಿ ನಿಂತಿದಿ
ಗುರಿ ಮುಟ್ಟಿಸುವುದಕ್ಕೆ ಸತತ ಸಹಾಯ ಮಾಡಿದಿ
ಗುರುವಿನ ಜಯ (ಮೋಕ್ಷ) ಕಂಡು ಸಂತಸ ಪಟ್ಟಿದಿ.

ಪರರ ಸುಖವನ್ನು ಕಂಡು ಹರ್ಷಿತನಾಗಿದಿ
ಪರರ ಕಷ್ಟದಲ್ಲಿ ಸಹಭಾಗಿಯಾಗಲು ಧೈರ್ಯದಿಂದ ನಿಂತಿದಿ
ನೀತಿ ಮಾರ್ಗದಿ ಕೀರ್ತಿಗಳಿಸಬೇಕೆಂದು ಬಯಸಿದಿ
ಸುವಿಚಾರ ಕಲಿತು ಸುಹೃದಯಿ ಆಗಿದಿ.

ಒರಟು ಕಲ್ಲನ್ನು ಕೆತ್ತಿಕೊಂಡು ಸುಂದರ ಮೂರ್ತಿಯಾದಿ
ಝಕಣಚಾರಿಯಂತೆ ಹಗಲಿರುಳು ನಿದ್ರೆಗೆಟ್ಟು ಬಳಲಿದಿ
ಗುರುವಿನ ಮನಶಾಂತಿಗೆ ಎಲ್ಲವೂ ತಿಳಕೊಂಡಿದಿ
ಯಾರು ಕದಿಯಲಾರದಂಥ ಐಶ್ವರ್ಯ ಗಳಿಸಿದಿ.

ಜಾತಿ ಮತ ಪಂಥಗಳ ಭೇದವ ಆರಿಸಿದಿ
ನಾವೆಲ್ಲರೂ ಒಂದೇ ತಾಯಿ ಮಕ್ಕಳೆಂದು ತಿಳಕೊಂಡಿದಿ
ಪ್ರಾಮಾಣಿಕತೆಗಾಗಿ ಪ್ರಾಣ ಅರ್ಪಿಸಲು ನಿಂತಿದಿ
ಅಂಧಕಾರದ ವಿರುದ್ಧ ಭಂಡೇಳಲು ಸಿದ್ಧನಾದಿ.

ಎಲೆ ಕಾಂಡದಲ್ಲಿ ಅಡಗಿದ ಹೂವಿನಂತಿರದೆ
ಎಲ್ಲರ ದೃಷ್ಟಿಗೆ ಕಾಣುವ ಕುಸುಮದಂತಾದಿ
ಗುರುವಿಗಾಗಿ ತನುಮನ ಧನವು ನೀಡಿದಿ
ಜಗವಿರುವವರೆಗೆ ಜಗಭರಿತ ಶಿಷ್ಯನಾದಿ.
*****
೦೬/೧೧/೧೯೯೭

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...