Home / ಕವನ / ಕವಿತೆ / ದೇಶದ ಕೃಷಿಕನೇ

ದೇಶದ ಕೃಷಿಕನೇ

ಕೃಷಿ ಮಾಡುವ ರೈತನೆ ನೀನು
ರಾಷ್ಟ್ರದ ಶ್ರೇಷ್ಠ ವ್ಯಕ್ತಿತ್ವ ನಿನ್ನದು
ದೇಶದ ಸಹಸ್ರಾರು ಜನತೆಗೆ ಬದುಕುಳಿಯಲು
ಆಹಾರ ಧಾನ್ಯವು ಪೂರೈಸುವ ದೇಶದ ರೈತ ನೀನು

ಹಗಲಿರುಳು ಎನ್ನದೇ ಹೊಲದಲ್ಲಿ ದುಡಿದು
ಆಹಾರ ಧಾನ್ಯ ಬೆಳೆ ಬೆಳೆಸುವನು ನೀನು
ತನ್ನ ಸಹಾಯಕ್ಕಾಗಿ ಎರಡೆತ್ತು ತೆಗೆದು
ಹೊಲವನ್ನು ಚನ್ನಾಗಿ ಉಳುಮೆ ಮಾಡುವನು ನೀನು.

ಹೊಲವನ್ನು ಚನ್ನಾಗಿ ಉಳುಮೆ ಮಾಡಿ
ಬೀಜ ಉತ್ತಿಬಿತ್ತಿ ಮಳೆಯರಾಯನಿಗಾಗಿ ಕಾಯುವನು ನೀನು
ಮಳೆರಾಯ ಸರಿಯಾಗಿ ಸಮಯಕ್ಕೆ ಬಂದರೆ
ಭೂತಾಯಿ ಬೆಳೆದು ಹೊತ್ತುಕೊಂಡು ನಿಲುವಳು.

ರಿಕ್ತತೆಯ ಬಡತನದಿ ಬಳಲುತ
ಸುಖಮಯ ಜೀವನ ಸಾಗಿಸುವನು ನೀನು
ಭೂಮಿತಾಯಿ ಹೊತ್ತುಕೊಂಡು ನಿಂತ ಬೆಳೆ
ಕಂಡು ಹೃದಯದಿ ಸಂತಸ ಪಡುವನು ನೀನು.

ಬಡಜನರಿಂದ ಕೂಡಿದ ಶ್ರೀಮಂತ ರಾಷ್ಟ್ರವೆಂದು
ಅರಿತು ಆರ್ಥಿಕ ಪ್ರಗತಿ ಸಾಧಿಸುವನು ನೀನು
ಹಬ್ಬ ಹರಿದಿನಗಳಲ್ಲಿ ಭೂತಾಯಿಗೆ ಗೌರವದಿ
ಪೂಜ್ಯನೆ ಭಾವದಿ ಆರಾಧಿಸುವನು ನೀನು.

ಯಾರ ಜೀವನದ ಬಗ್ಗೆ ಅವಹೇಳನ ಬಯಸದೇ
ತನ್ನ ಜೀವನದಿ ತಾ ಒಳಿತನು ಬಯಸುವನು
ಯಾರ ವಿಮರ್ಶೆಗೆ ಬಲಿಯಾಗದೇ ತಾ
ಸರೋವರದಂತೆ ಜೀವನ ಸಾಗಿಸುವನು ನೀನು.

ಗುರಿ ಮುಟ್ಟುವದಕ್ಕೆ ಸತತ ಸಾಧನೆ ಗೈದಿ
ಧಾನ್ಯ ಬೆಳೆಸುವಲ್ಲಿ ನೀ ಸಫಲನಾದಿ
ಬ್ರಹ್ಮ, ವಿಷ್ಣು, ಮಹೇಶ್ವರರ ಸ್ವರೂಪನಾದಿ
ಜಗವಿರುವವರೆಗೆ ಜಗಭರಿತ ರೈತ ನೀ ನಾದಿ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...