Home / ಕವನ / ಕವಿತೆ / ಕಾರಂಜಿ ಕೆರೆಯ ಬಳಿ

ಕಾರಂಜಿ ಕೆರೆಯ ಬಳಿ

ಗಾಳಿಯಲ್ಲಾವುದೋ ಕೋಗಿಲೆಯು ತನ್ನದೆಯ
ಅಳಲ ತೇಲಿಬಿಡುತ್ತಿದೆ. ದೂರದಲಿ ನೀಲಿಮೆಯ
ಆಗಸದಿಂದೊಂದು ಬಿಳಿಯನ್ನು ಸಿಡಿದಂತೆ
ನಕ್ಷತ್ರ ಮೂಡುತಿರೆ, ಮೂಡಲೋ ಬೇಡವೋ
ಎನುತ ಚಿಂತಿಸುತೊಂದು ಎಳತಾರೆ ಕತ್ತಲಲಿ
ಬೆದರಿ ಹೊದ್ದಿದೆ ಮುಸುಕು ! ಕಾರಂಜಿ ಕೆರೆಯಲ್ಲಿ
ಅಲಗುವುದೊ, ಮಲಗಿಹುದೊ, ಎನುವಂತೆ ಸುಳಿಯುತಿಹ
ಮೆಲ್ಲಲೆಗಳಾಳದಲಿ ನೆರಳುಗಳು ನಡುಗುತಿವೆ!
ಅವು ತೊಟ್ಟ ನೀರಂಗಿಯಲಿ ಕಾಲ ಮಾಡಿಟ್ಟ
ಹರುಕಿನಲಿ, ತಾರೆಗಳ ಛಾಯೆ ಅಲ್ಲಲ್ಲಿರಲು,
ದೂರದಲಿ, ಮೂಡಲಕೆ, ಕಂಬವೊಂದರ ಮೇಲೆ
ಮಂಕಡರಿ ಮಿಣುಕುತಿಹ ದೀಪದರೆನೆರಳೊಂದು
ಅಲೆಗಳಾಳದ ಇರುಳ ಭೇದಿಸುತ ಅತ್ತಿತ್ತ
ಒಸರುತಿದೆ. ಆ ಮೂಲೆಯೊಳಗೊಂದು ಬೆಳ್ವಕ್ಕಿ
ನೀರೊಳಗ ಮೀನುಗಳ ಸಂಸಾರವನು ಹೊಂಚಿ
ಕಾಯುತಿದೆ. ಇತ್ತ ಮೃಗಶಾಲೆಯಲಿ, ಬಂಧನದ
ಕೂಳನುಣ್ಣುತ ಮರುಗಿ, ಬಿಡುಗಡೆಗೆ ಹಂಬಲಿಸಿ,
ಒಲ್ಲದೆಯೆ ಬಲ್ಲಿದರ ಬಿಲ್ಗಳಿಗೆ ನೇಣಾಗಿ,
ಕಾತರದಿ, ಸಂಕಟದಿ, ಇರುಳಲೇ ನರಳುತಿಹ
ಹಾರು ಹಕ್ಕಿಗಳೆದೆಯ ಕೊರಗ ದನಿಯೊಳು ದನಿಯ
ಕೂಡಿಸಿವೆ ಕಾಡ ಹುಲಿ ಸಿಂಹಗಳು, ಅದ ಕೇಳಿ
ಮಾರುದನಿ, ಆ ಕಡೆಗೆ, ಮಾನವನ ಮುಗಿಲಾಸೆ
ಬಿಂಬಿಸುತ, ಚಾಮುಂಡಿ ಬೆಟ್ಟ ನೆಟ್ಟನೆ ನಿಂತು
ಮುಗಿಲಿಗೀಟಿಯ ಹಾಕಲೆನುವಂತೆ ನಿಮಿರಿಹುದ
ಕಂಡು ಹಿಂದೆಗೆಯುತಿದೆ; ಮೌನಕ್ಕೆ ಶರಣಾಗಿ
ನೀರಿನಲ್ಲಿ ಮುಳುಗುತಿದೆ, ನೀರ ಪಕ್ಕದ ಹಾದಿ
ತುಳಿಯುತಿಹ ಗೆಳಯರಗೊ, ಕತ್ತಲಲಿ ಬರಿಯೆರಡು
ನೆರಳಾಗಿ ಸರಿದಿಹರು. ಅವರಲೊಬ್ಬನ ದನಿಯ
ಹೆಣ್ತನದ ಮಾಧುರ್ಯ, ಅಳಿದ ಬಾಳಿನ ಒಂದು
ಸವಿಗನಸ ನನಸಂತೆ, ಹೃದಯದೊಳ ಇಂಚರದಿ
ಹಾಸು ಹೊಕ್ಕಾಗುತಿರೆ, ಮೈ ಮನಸು ಮೇಲೇರಿ
ಆಗಸದ ಮಡಿಲಿನಲಿ ಉಯಾಲೆಯಾಡುತಿಹ
ಬಿಳಿ ಮೋಡದೊಳಗೊಂದು ಕಣವಾಗಿ ಇಣುಕುತಿದೆ.
ಕೇಳುತಿದೆ- ಸ್ವರ್ಗದೊಳಗಿಂತು ಆತ್ಮೀಯತೆಯ,
ಗೆಳೆತನದ, ನೆನಪುಗಳ, ಪ್ರೇಮದುನ್ಮಾದಗಳ
ನೋವು ನಲೆಗಳುಂಟೆ ?- ಇಲ್ಲಿರಲು ಅಲ್ಲೆಲ್ಲಿ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...