Home / ಕವನ / ಕವಿತೆ / ಕಾರಂಜಿ ಕೆರೆಯ ಬಳಿ

ಕಾರಂಜಿ ಕೆರೆಯ ಬಳಿ

ಗಾಳಿಯಲ್ಲಾವುದೋ ಕೋಗಿಲೆಯು ತನ್ನದೆಯ
ಅಳಲ ತೇಲಿಬಿಡುತ್ತಿದೆ. ದೂರದಲಿ ನೀಲಿಮೆಯ
ಆಗಸದಿಂದೊಂದು ಬಿಳಿಯನ್ನು ಸಿಡಿದಂತೆ
ನಕ್ಷತ್ರ ಮೂಡುತಿರೆ, ಮೂಡಲೋ ಬೇಡವೋ
ಎನುತ ಚಿಂತಿಸುತೊಂದು ಎಳತಾರೆ ಕತ್ತಲಲಿ
ಬೆದರಿ ಹೊದ್ದಿದೆ ಮುಸುಕು ! ಕಾರಂಜಿ ಕೆರೆಯಲ್ಲಿ
ಅಲಗುವುದೊ, ಮಲಗಿಹುದೊ, ಎನುವಂತೆ ಸುಳಿಯುತಿಹ
ಮೆಲ್ಲಲೆಗಳಾಳದಲಿ ನೆರಳುಗಳು ನಡುಗುತಿವೆ!
ಅವು ತೊಟ್ಟ ನೀರಂಗಿಯಲಿ ಕಾಲ ಮಾಡಿಟ್ಟ
ಹರುಕಿನಲಿ, ತಾರೆಗಳ ಛಾಯೆ ಅಲ್ಲಲ್ಲಿರಲು,
ದೂರದಲಿ, ಮೂಡಲಕೆ, ಕಂಬವೊಂದರ ಮೇಲೆ
ಮಂಕಡರಿ ಮಿಣುಕುತಿಹ ದೀಪದರೆನೆರಳೊಂದು
ಅಲೆಗಳಾಳದ ಇರುಳ ಭೇದಿಸುತ ಅತ್ತಿತ್ತ
ಒಸರುತಿದೆ. ಆ ಮೂಲೆಯೊಳಗೊಂದು ಬೆಳ್ವಕ್ಕಿ
ನೀರೊಳಗ ಮೀನುಗಳ ಸಂಸಾರವನು ಹೊಂಚಿ
ಕಾಯುತಿದೆ. ಇತ್ತ ಮೃಗಶಾಲೆಯಲಿ, ಬಂಧನದ
ಕೂಳನುಣ್ಣುತ ಮರುಗಿ, ಬಿಡುಗಡೆಗೆ ಹಂಬಲಿಸಿ,
ಒಲ್ಲದೆಯೆ ಬಲ್ಲಿದರ ಬಿಲ್ಗಳಿಗೆ ನೇಣಾಗಿ,
ಕಾತರದಿ, ಸಂಕಟದಿ, ಇರುಳಲೇ ನರಳುತಿಹ
ಹಾರು ಹಕ್ಕಿಗಳೆದೆಯ ಕೊರಗ ದನಿಯೊಳು ದನಿಯ
ಕೂಡಿಸಿವೆ ಕಾಡ ಹುಲಿ ಸಿಂಹಗಳು, ಅದ ಕೇಳಿ
ಮಾರುದನಿ, ಆ ಕಡೆಗೆ, ಮಾನವನ ಮುಗಿಲಾಸೆ
ಬಿಂಬಿಸುತ, ಚಾಮುಂಡಿ ಬೆಟ್ಟ ನೆಟ್ಟನೆ ನಿಂತು
ಮುಗಿಲಿಗೀಟಿಯ ಹಾಕಲೆನುವಂತೆ ನಿಮಿರಿಹುದ
ಕಂಡು ಹಿಂದೆಗೆಯುತಿದೆ; ಮೌನಕ್ಕೆ ಶರಣಾಗಿ
ನೀರಿನಲ್ಲಿ ಮುಳುಗುತಿದೆ, ನೀರ ಪಕ್ಕದ ಹಾದಿ
ತುಳಿಯುತಿಹ ಗೆಳಯರಗೊ, ಕತ್ತಲಲಿ ಬರಿಯೆರಡು
ನೆರಳಾಗಿ ಸರಿದಿಹರು. ಅವರಲೊಬ್ಬನ ದನಿಯ
ಹೆಣ್ತನದ ಮಾಧುರ್ಯ, ಅಳಿದ ಬಾಳಿನ ಒಂದು
ಸವಿಗನಸ ನನಸಂತೆ, ಹೃದಯದೊಳ ಇಂಚರದಿ
ಹಾಸು ಹೊಕ್ಕಾಗುತಿರೆ, ಮೈ ಮನಸು ಮೇಲೇರಿ
ಆಗಸದ ಮಡಿಲಿನಲಿ ಉಯಾಲೆಯಾಡುತಿಹ
ಬಿಳಿ ಮೋಡದೊಳಗೊಂದು ಕಣವಾಗಿ ಇಣುಕುತಿದೆ.
ಕೇಳುತಿದೆ- ಸ್ವರ್ಗದೊಳಗಿಂತು ಆತ್ಮೀಯತೆಯ,
ಗೆಳೆತನದ, ನೆನಪುಗಳ, ಪ್ರೇಮದುನ್ಮಾದಗಳ
ನೋವು ನಲೆಗಳುಂಟೆ ?- ಇಲ್ಲಿರಲು ಅಲ್ಲೆಲ್ಲಿ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...